ಜಿಲ್ಲೆ ಮಂಡ್ಯ ತಾಲೂಕು ಬಸರಾಳು ಹೋಬಳಿ ನಂದಹಳ್ಳಿ ಸರ್ಕಾರಿ ಶಾಲೆ ಒಂದು ಭಾಗ ಕುಸಿದಿದ್ದು ಕಟ್ಟಡ ತೆರವು ಮಾಡದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಓದುವವಿದ್ಯಾರ್ಥಿಗಳು ಆತಂಕ ಪಡುವ ಸ್ಥಿತಿ ನಿರ್ಮಾಣವಾಗಿದೆ.
Report By Bora Nayak | Mandya | Last Updated at April 1 2020
ನಂದಹಳ್ಳಿ ಗ್ರಾಮದ ಶಾಲೆಯಲ್ಲಿ ಓದುತ್ತಿರುವ ಮಕ್ಕಳ ಶಾಲೆಯ ಕಟ್ಟಡ ಮುರಿದುಕೊಂಡು ಯಾವ ಸಂದರ್ಭದಲ್ಲಾದರೂ ಬೀಳಬಹುದು.ಅಂಚು ಮತ್ತು ಕಟ್ಟಡದ ಗೋಡೆ ಕಿಟಕಿ ಬಾಗಿಲು ಮುರಿದು ಹೋಗಿದೆ.
ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಕಡುಬಡವರ ಅಮಾಯಕರ ಮಕ್ಕಳು ವಿದ್ಯಾಭ್ಯಾಸಕ್ಕೆ ಹೋಗುತ್ತಿರುವುದು ಈ ಹಳೆಯ ಕಟ್ಟಡವು ಓದುತ್ತಿರುವಾ ಮಕ್ಕಳ ಮೇಲೆ ತೂಗುಗತ್ತಿಯಾಗಿ ಪರಿಣಮಿಸಿದೆ ಇದು ಯಾವ ಸಂದರ್ಭದಲ್ಲಾದರೂ ಬೀಳಬಹುದು.
ಇದರ ಬಗ್ಗೆ ಎಷ್ಟೇ ಮನವಿ ಮಾಡಿದ್ದರು ಪ್ರಯೋಜನವಾಗಿಲ್ಲ. ಮಕ್ಕಳ ಪ್ರಾಣದ ಜತೆ ಅಧಿಕಾರಿಗಳು ಆಟವಾಡುತ್ತಿದ್ದು, ಪ್ರಾಣ ಹಾನಿಯಾಗುವ ಮೊದಲು ಶಿಥಿಲ ಕಟ್ಟಡವನ್ನು ನೆಲಸಮಗೊಳಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
ಇದರ ಜೊತೆಗೆ ಜೆಡಿಎಸ್ ಪಕ್ಷದ ಎಂ.ಶ್ರೀನಿವಾಸ್ ರವರು ಒಂದು ಬಾರಿಯಾದರೂ ಕೂಡ ಭೇಟಿ ಕೊಟ್ಟಿಲ ಈ ನಂದಹಳ್ಳಿ ಗ್ರಾಮಕ್ಕೆ ಶಾಸಕರಾದ ಶ್ರೀನಿವಾಸ್ ಕಡೆಯಿಂದ ಯಾವುದೇ ಕೆಲಸ ಕಾರ್ಯಗಳು ಸಂಪೂರ್ಣವಾಗಿ ನಡೆಯುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಗ್ರಾಮಕ್ಕೆ ಒಂದು ಬಾರಿಯಾದರೂ ಈ ಶಾಲೆಗೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿಯನ್ನು ನೀಡಿ ಪರಿಶೀಲನೆ ನಡೆಸಿ ಈ ಶಾಲೆಯ ಬಗ್ಗೆ ಕ್ರಮವನ್ನು ತೆಗೆದುಕೊಂಡು ಹೊಸದಾಗಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಬೇಕು ಎಂಬುದು ಗ್ರಾಮಸ್ಥರು ಆಶಯವಾಗಿದೆ.